ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

July 31, 2019
7:13 PM

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror