ರಾಜ್ಯ

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

Advertisement

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

Advertisement

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

54 minutes ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

8 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

13 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

14 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago