Advertisement
ರಾಜ್ಯ

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

Share

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

Advertisement
Advertisement

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

3 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

3 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

4 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

4 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

4 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

4 hours ago