Advertisement
ರಾಜ್ಯ

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

Share

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

6 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

16 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

16 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago