Advertisement
ರಾಜ್ಯ

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

Share

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

8 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

8 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

9 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

17 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

22 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

22 hours ago