Advertisement
ರಾಜ್ಯ

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

Share

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

14 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

14 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

14 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago