ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!

October 18, 2019
9:44 AM

ಸುಳ್ಯ:ಸುಳ್ಯ ನಗರದಲ್ಲಿ ಕಸ ವಿಲೇವಾರಿಯಲ್ಲಿ ಮತ್ತೆ ಅವ್ಯವಸ್ಥೆ ತಾಂಡವವಾಡುತ್ತಿದೆ. ನಗರದ ಹಲವು ಕಡೆಗಳಲ್ಲಿ ಕಸ ಸಂಗ್ರಹ ಮಾಡದೆ, ಕಸದ ವಾಹನ ಬಾರದೆ ಹಲವು ದಿನಗಳು ಕಳೆದಿದೆ.

ಸುಳ್ಯದ ಕುರುಂಜಿಭಾಗ್ ಗೆ ಕಸದ ವಾಹನ ಬಾರದೇ ನಾಲ್ಕು ದಿನಗಳಾಯಿತು. ಹಳೆಗೇಟಿಗೆ, ಜಯನಗರಕ್ಕೆ ಕಸ ಸಂಗ್ರಹ ವಾಹನ ಬಾರದೇ ವಾರವೇ ಕಳೆಯಿತು. ಹೀಗೆ ಹಲವು ವಾರ್ಡ್ ಗಳಲ್ಲಿ ಇದೇ ಪರಿಸ್ಥಿತಿ ಇದೆ. ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ತುಂಬಿ ತುಳುಕುತಿದೆ. ಸಾರ್ವಜನಿಕರು ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಗರದ ಕಸ ಸಂಗ್ರಹಿಸದೆ, ಕಸ ವಿಲೇವಾರಿ ನಡೆಸದೆ ನಗರಾಡಳಿತ ಏನು ಮಾಡುತಿದೆ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಕಸ ಸಂಗ್ರಹಿಸುವ ವಾಹನಗಳು, ಕಾರ್ಮಿಕರು ಎಲ್ಲಿ ಹೋಗಿದ್ದಾರೆ..? ಸ್ವಚ್ಛ ನಗರ, ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಹೊರಟಿರುವ ನಗರ ಪಂಚಾಯತ್ ಗೆ ಯಕಶ್ಚಿತ್ ಮನೆ ಮನೆಗಳಿಂದ ಕಸ ಸಂಗ್ರಹಿಸಿ ವಿಲೇವಾರಿ ಮಾಡಲು ಕೂಡ ಸಾಧ್ಯವಾಗುವುದಿಲ್ಲವಾ.? ಹಾಗಾದರೆ ಯಾವ ರೀತಿಯ ಸ್ವಚ್ಛ ನಗರ ಮಾಡಲು ಸಾಧ್ಯ? ಸ್ವಚ್ಛ ನಗರ ಎಂಬುದು ಕೇವಲ ಪ್ರಚಾರದ ಪ್ರಹಸನವಾ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಒಂದು ವರುಷದಿಂದ ನಗರದ ಹಸಿ ಕಸವನ್ನು ಗೊಬ್ಬರ ಮಾಡಲು ಕೃಷಿಕರ ತೋಟಕ್ಕೆ ಹೋಗುತ್ತಿತ್ತು. ಆದರೆ ಅದು ಈಗ ಸ್ಥಗಿತಗೊಂಡಿದೆ. ಕಲ್ಚರ್ಪೆಗೆ ಕಸ ಸಾಗಿಸಲಾಗಿದ್ದರೂ ಅಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಎಲ್ಲರೂ ಕೈಚೆಲ್ಲಿ ಕುಳಿತಿದ್ದಾರೆ: ನಗರದಲ್ಲಿ ಕಸ ಸಂಗ್ರಹ ಮಾಡದ ಬಗ್ಗೆ ನಗರ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದಾಗ ‘ಕೂಡಲೇ ಕ್ರಮ ವಹಿಸುತ್ತೇವೆ’ ಎಂದು ಹೇಳಿ ಸುಮ್ಮನಾಗಿದ್ದಾರೆ. ನಗರ ಪಂಚಾಯತ್ ಗೆ 20 ವಾರ್ಡ್ ಗಳಿಗೆ ಸದಸ್ಯರ ಆಯ್ಕೆಯಾಗಿ 5 ತಿಂಗಳಾದರೂ ನಮಗೆ ಅಧಿಕಾರ ಸಿಕ್ಕಿಲ್ಲ ಎಂದು ಅವರು ಮೌನ ತಾಳಿದ್ದಾರೆ. ಒಟ್ಟಿನಲ್ಲಿ ನಗರಲ್ಲಿ ಕಸ ತುಂಬಿ ದುರ್ವಾಸನೆ ಬೀರುತ್ತಿದ್ದರೂ, ಕಸ ಸಂಗ್ರಹಿಸದೆ, ತ್ಯಾಜ್ಯ ಸಮಸ್ಯೆ ಪರಿಹರಿಸಲಾಗದೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೈ ಚೆಲ್ಲಿ ಕುಳಿತಿದ್ದಾರೆ. ಸಾರ್ವಜನಿಕರು ಮಾತ್ರ ಕಸವನ್ನು ಏನು ಮಾಡಬೇಕು ಎಂದು ತೋಚದೆ ಹಿಡಿ ಶಾಪ ಹಾಕುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror