MIRROR FOCUS

ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಸುಳ್ಯ ನಗರದಲ್ಲಿ ಕಸ ವಿಲೇವಾರಿಯಲ್ಲಿ ಮತ್ತೆ ಅವ್ಯವಸ್ಥೆ ತಾಂಡವವಾಡುತ್ತಿದೆ. ನಗರದ ಹಲವು ಕಡೆಗಳಲ್ಲಿ ಕಸ ಸಂಗ್ರಹ ಮಾಡದೆ, ಕಸದ ವಾಹನ ಬಾರದೆ ಹಲವು ದಿನಗಳು ಕಳೆದಿದೆ.

Advertisement
Advertisement

ಸುಳ್ಯದ ಕುರುಂಜಿಭಾಗ್ ಗೆ ಕಸದ ವಾಹನ ಬಾರದೇ ನಾಲ್ಕು ದಿನಗಳಾಯಿತು. ಹಳೆಗೇಟಿಗೆ, ಜಯನಗರಕ್ಕೆ ಕಸ ಸಂಗ್ರಹ ವಾಹನ ಬಾರದೇ ವಾರವೇ ಕಳೆಯಿತು. ಹೀಗೆ ಹಲವು ವಾರ್ಡ್ ಗಳಲ್ಲಿ ಇದೇ ಪರಿಸ್ಥಿತಿ ಇದೆ. ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ತುಂಬಿ ತುಳುಕುತಿದೆ. ಸಾರ್ವಜನಿಕರು ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಗರದ ಕಸ ಸಂಗ್ರಹಿಸದೆ, ಕಸ ವಿಲೇವಾರಿ ನಡೆಸದೆ ನಗರಾಡಳಿತ ಏನು ಮಾಡುತಿದೆ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಕಸ ಸಂಗ್ರಹಿಸುವ ವಾಹನಗಳು, ಕಾರ್ಮಿಕರು ಎಲ್ಲಿ ಹೋಗಿದ್ದಾರೆ..? ಸ್ವಚ್ಛ ನಗರ, ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಹೊರಟಿರುವ ನಗರ ಪಂಚಾಯತ್ ಗೆ ಯಕಶ್ಚಿತ್ ಮನೆ ಮನೆಗಳಿಂದ ಕಸ ಸಂಗ್ರಹಿಸಿ ವಿಲೇವಾರಿ ಮಾಡಲು ಕೂಡ ಸಾಧ್ಯವಾಗುವುದಿಲ್ಲವಾ.? ಹಾಗಾದರೆ ಯಾವ ರೀತಿಯ ಸ್ವಚ್ಛ ನಗರ ಮಾಡಲು ಸಾಧ್ಯ? ಸ್ವಚ್ಛ ನಗರ ಎಂಬುದು ಕೇವಲ ಪ್ರಚಾರದ ಪ್ರಹಸನವಾ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಒಂದು ವರುಷದಿಂದ ನಗರದ ಹಸಿ ಕಸವನ್ನು ಗೊಬ್ಬರ ಮಾಡಲು ಕೃಷಿಕರ ತೋಟಕ್ಕೆ ಹೋಗುತ್ತಿತ್ತು. ಆದರೆ ಅದು ಈಗ ಸ್ಥಗಿತಗೊಂಡಿದೆ. ಕಲ್ಚರ್ಪೆಗೆ ಕಸ ಸಾಗಿಸಲಾಗಿದ್ದರೂ ಅಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಎಲ್ಲರೂ ಕೈಚೆಲ್ಲಿ ಕುಳಿತಿದ್ದಾರೆ: ನಗರದಲ್ಲಿ ಕಸ ಸಂಗ್ರಹ ಮಾಡದ ಬಗ್ಗೆ ನಗರ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದಾಗ ‘ಕೂಡಲೇ ಕ್ರಮ ವಹಿಸುತ್ತೇವೆ’ ಎಂದು ಹೇಳಿ ಸುಮ್ಮನಾಗಿದ್ದಾರೆ. ನಗರ ಪಂಚಾಯತ್ ಗೆ 20 ವಾರ್ಡ್ ಗಳಿಗೆ ಸದಸ್ಯರ ಆಯ್ಕೆಯಾಗಿ 5 ತಿಂಗಳಾದರೂ ನಮಗೆ ಅಧಿಕಾರ ಸಿಕ್ಕಿಲ್ಲ ಎಂದು ಅವರು ಮೌನ ತಾಳಿದ್ದಾರೆ. ಒಟ್ಟಿನಲ್ಲಿ ನಗರಲ್ಲಿ ಕಸ ತುಂಬಿ ದುರ್ವಾಸನೆ ಬೀರುತ್ತಿದ್ದರೂ, ಕಸ ಸಂಗ್ರಹಿಸದೆ, ತ್ಯಾಜ್ಯ ಸಮಸ್ಯೆ ಪರಿಹರಿಸಲಾಗದೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೈ ಚೆಲ್ಲಿ ಕುಳಿತಿದ್ದಾರೆ. ಸಾರ್ವಜನಿಕರು ಮಾತ್ರ ಕಸವನ್ನು ಏನು ಮಾಡಬೇಕು ಎಂದು ತೋಚದೆ ಹಿಡಿ ಶಾಪ ಹಾಕುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

5 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

14 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

15 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

15 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

15 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

15 hours ago