Advertisement
MIRROR FOCUS

ಸುಳ್ಯದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ – ನಗರದಲ್ಲಿ ಮನೆಗಳಲ್ಲೇ ಉಳಿಯುತ್ತಿರುವ ಕಸದ ರಾಶಿ….!

Share

ಸುಳ್ಯ:ಸುಳ್ಯ ನಗರದಲ್ಲಿ ಕಸ ವಿಲೇವಾರಿಯಲ್ಲಿ ಮತ್ತೆ ಅವ್ಯವಸ್ಥೆ ತಾಂಡವವಾಡುತ್ತಿದೆ. ನಗರದ ಹಲವು ಕಡೆಗಳಲ್ಲಿ ಕಸ ಸಂಗ್ರಹ ಮಾಡದೆ, ಕಸದ ವಾಹನ ಬಾರದೆ ಹಲವು ದಿನಗಳು ಕಳೆದಿದೆ.

ಸುಳ್ಯದ ಕುರುಂಜಿಭಾಗ್ ಗೆ ಕಸದ ವಾಹನ ಬಾರದೇ ನಾಲ್ಕು ದಿನಗಳಾಯಿತು. ಹಳೆಗೇಟಿಗೆ, ಜಯನಗರಕ್ಕೆ ಕಸ ಸಂಗ್ರಹ ವಾಹನ ಬಾರದೇ ವಾರವೇ ಕಳೆಯಿತು. ಹೀಗೆ ಹಲವು ವಾರ್ಡ್ ಗಳಲ್ಲಿ ಇದೇ ಪರಿಸ್ಥಿತಿ ಇದೆ. ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ತುಂಬಿ ತುಳುಕುತಿದೆ. ಸಾರ್ವಜನಿಕರು ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಗರದ ಕಸ ಸಂಗ್ರಹಿಸದೆ, ಕಸ ವಿಲೇವಾರಿ ನಡೆಸದೆ ನಗರಾಡಳಿತ ಏನು ಮಾಡುತಿದೆ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಕಸ ಸಂಗ್ರಹಿಸುವ ವಾಹನಗಳು, ಕಾರ್ಮಿಕರು ಎಲ್ಲಿ ಹೋಗಿದ್ದಾರೆ..? ಸ್ವಚ್ಛ ನಗರ, ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಹೊರಟಿರುವ ನಗರ ಪಂಚಾಯತ್ ಗೆ ಯಕಶ್ಚಿತ್ ಮನೆ ಮನೆಗಳಿಂದ ಕಸ ಸಂಗ್ರಹಿಸಿ ವಿಲೇವಾರಿ ಮಾಡಲು ಕೂಡ ಸಾಧ್ಯವಾಗುವುದಿಲ್ಲವಾ.? ಹಾಗಾದರೆ ಯಾವ ರೀತಿಯ ಸ್ವಚ್ಛ ನಗರ ಮಾಡಲು ಸಾಧ್ಯ? ಸ್ವಚ್ಛ ನಗರ ಎಂಬುದು ಕೇವಲ ಪ್ರಚಾರದ ಪ್ರಹಸನವಾ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಒಂದು ವರುಷದಿಂದ ನಗರದ ಹಸಿ ಕಸವನ್ನು ಗೊಬ್ಬರ ಮಾಡಲು ಕೃಷಿಕರ ತೋಟಕ್ಕೆ ಹೋಗುತ್ತಿತ್ತು. ಆದರೆ ಅದು ಈಗ ಸ್ಥಗಿತಗೊಂಡಿದೆ. ಕಲ್ಚರ್ಪೆಗೆ ಕಸ ಸಾಗಿಸಲಾಗಿದ್ದರೂ ಅಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಎಲ್ಲರೂ ಕೈಚೆಲ್ಲಿ ಕುಳಿತಿದ್ದಾರೆ: ನಗರದಲ್ಲಿ ಕಸ ಸಂಗ್ರಹ ಮಾಡದ ಬಗ್ಗೆ ನಗರ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದಾಗ ‘ಕೂಡಲೇ ಕ್ರಮ ವಹಿಸುತ್ತೇವೆ’ ಎಂದು ಹೇಳಿ ಸುಮ್ಮನಾಗಿದ್ದಾರೆ. ನಗರ ಪಂಚಾಯತ್ ಗೆ 20 ವಾರ್ಡ್ ಗಳಿಗೆ ಸದಸ್ಯರ ಆಯ್ಕೆಯಾಗಿ 5 ತಿಂಗಳಾದರೂ ನಮಗೆ ಅಧಿಕಾರ ಸಿಕ್ಕಿಲ್ಲ ಎಂದು ಅವರು ಮೌನ ತಾಳಿದ್ದಾರೆ. ಒಟ್ಟಿನಲ್ಲಿ ನಗರಲ್ಲಿ ಕಸ ತುಂಬಿ ದುರ್ವಾಸನೆ ಬೀರುತ್ತಿದ್ದರೂ, ಕಸ ಸಂಗ್ರಹಿಸದೆ, ತ್ಯಾಜ್ಯ ಸಮಸ್ಯೆ ಪರಿಹರಿಸಲಾಗದೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೈ ಚೆಲ್ಲಿ ಕುಳಿತಿದ್ದಾರೆ. ಸಾರ್ವಜನಿಕರು ಮಾತ್ರ ಕಸವನ್ನು ಏನು ಮಾಡಬೇಕು ಎಂದು ತೋಚದೆ ಹಿಡಿ ಶಾಪ ಹಾಕುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

25 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

11 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

16 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago