ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯಾಗಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸುಳ್ಯದಲ್ಲಿ ನ.ಪಂ.ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕಲ್ಲುಮುಟ್ಲುವಿನಲ್ಲಿ ನೀರು ಸರಬರಾಜು ಮಾಡಲು ನಿರ್ಮಿಸಿದ ತಾತ್ಕಾಲಿಕ ಒಡ್ಡು ಮತ್ತು ಪಂಪ್ ಹೌಸ್ ಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ತಾತ್ಕಾಲಿಕ ಒಡ್ಡು ನಿರ್ಮಿಸಿದ ಸ್ಥಳದಲ್ಲಿ ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಶ್ವತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಹಾಗು ನ.ಪಂ ಅಭ್ಯರ್ಥಿ ಎಂ.ವೆಂಕಪ್ಪ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಮುಖಂಡರಾದ ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…