ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯಾಗಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸುಳ್ಯದಲ್ಲಿ ನ.ಪಂ.ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕಲ್ಲುಮುಟ್ಲುವಿನಲ್ಲಿ ನೀರು ಸರಬರಾಜು ಮಾಡಲು ನಿರ್ಮಿಸಿದ ತಾತ್ಕಾಲಿಕ ಒಡ್ಡು ಮತ್ತು ಪಂಪ್ ಹೌಸ್ ಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ತಾತ್ಕಾಲಿಕ ಒಡ್ಡು ನಿರ್ಮಿಸಿದ ಸ್ಥಳದಲ್ಲಿ ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಶ್ವತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಹಾಗು ನ.ಪಂ ಅಭ್ಯರ್ಥಿ ಎಂ.ವೆಂಕಪ್ಪ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಮುಖಂಡರಾದ ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…