ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯಾಗಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸುಳ್ಯದಲ್ಲಿ ನ.ಪಂ.ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕಲ್ಲುಮುಟ್ಲುವಿನಲ್ಲಿ ನೀರು ಸರಬರಾಜು ಮಾಡಲು ನಿರ್ಮಿಸಿದ ತಾತ್ಕಾಲಿಕ ಒಡ್ಡು ಮತ್ತು ಪಂಪ್ ಹೌಸ್ ಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ತಾತ್ಕಾಲಿಕ ಒಡ್ಡು ನಿರ್ಮಿಸಿದ ಸ್ಥಳದಲ್ಲಿ ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಶ್ವತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಹಾಗು ನ.ಪಂ ಅಭ್ಯರ್ಥಿ ಎಂ.ವೆಂಕಪ್ಪ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಮುಖಂಡರಾದ ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…