ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.
ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.
ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…