ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.
ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.
ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…