ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.
ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.
ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…