ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.
ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.
ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…