ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.
ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.
ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…