Advertisement
ಸುದ್ದಿಗಳು

‘ಕಾಂಗ್ರೆಸ್ ಸಭೆ ಅಂಗಡಿಯಲ್ಲಿ ನಡೆಯುತ್ತಿದೆ’- ಎಂಬ ಹೇಳಿಕೆ ಭಿನ್ನಮತ ಸ್ಫೋಟಕ್ಕೆ ಕಾರಣವಾಯಿತು…!

Share

ಸುಳ್ಯ: ‘ಸುಳ್ಯದ ಕಾಂಗ್ರೆಸ್ ಕಚೇರಿ ತೆರೆಯುತ್ತಿಲ್ಲ. ಪಕ್ಷದ ಸಭೆಗಳು ಅಂಗಡಿಯಲ್ಲಿ ನಡೆಯುತ್ತಿದೆ’ ಎಂಬ ಕಾಂಗ್ರೆಸ್ ನಾಯಕರೋರ್ವರ ಟೀಕೆ ರಾಜ್ಯ ನಾಯಕರ ಎದುರಿನಲ್ಲೇ ಕಾಂಗ್ರೆಸ್ ಎರಡು ಬಣಗಳ ನಡುವೆ ಭಿನ್ನಮತ ಒಮ್ಮಿಂದೊಮ್ಮೆಲೆ ಸ್ಪೋಟಗೊಳ್ಳಲು ಕಾರಣವಾಯಿತು‌…!

ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಉಪಸ್ಥಿತಿಯಲ್ಲಿ ಮಂಗಳವಾರ ಸಂಜೆ ಖಾಸಗೀ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಿನ್ನಮತ ಸ್ಪೋಟಗೊಂಡು ಸಭೆ ಅರ್ಧಕ್ಕೆ ಮೊಟಕುಗೊಂಡಿತು.

ಬೂಡು ವಾರ್ಡ್ ನಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯವಾಗಿ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದ ರಿಯಾಝ್ ಕಟ್ಟೆಕ್ಕಾರ್ ಸಭೆಗೆ ಆಗಮಿಸಿದಾಗ ಒಂದು ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಇದನ್ನು ಪ್ರಶ್ನಿಸಿದ್ದರು. ಬಳಿಕ ರಿಯಾಝ್ ಅವರನ್ನು ಸಭೆಯಿಂದ ಹೊರಹೋಗುವಂತೆ ನಾಯಕರು ಸೂಚಿಸಿದ್ದರು. ಹೊರ ಕಳಿಸಿದರ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಇದು ಒಮ್ಮೆಗೆ ಶಾಂತವಾದರೂ ‘ಕಾಂಗ್ರೆಸ್ ಸಭೆ ಅಂಗಡಿಯಲ್ಲಿ ನಡೆಯುತಿದೆ’ ಎಂಬ ನಾಯಕರ ಹೇಳಿಕೆ ಸಭೆಯಲ್ಲಿ ಮತ್ತೆ ಭಾರೀ ಗದ್ದಲಕ್ಕೆ, ವಾಗ್ವಾದಕ್ಕೆ ಕಾರಣವಾಯಿತು. ಬಂಡಾಯ ಪಕ್ಷೇತರ ಅಭ್ಯರ್ಥಿಯನ್ನು ಪಕ್ಷದವರೇ ಆದ ಕೆಲವು ನಾಯಕರು ಬೆಂಬಲಿಸಿದ್ದಾರೆ. ಇದು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯ ಸೋಲಿಗೆ ಕಾರಣವಯಿತು. ಇಂತಹಾ ನಾಯಕರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಇನ್ನೊಂದು ಬಣ ತಿರುಗೇಟು ನೀಡಿದಾಗ ಸಭೆಯಲ್ಲಿ ನಾಯಕರ ಮಾತಿನ ಸಮರ ಆರಂಭಗೊಂಡಿತು. ಬಳಿಕ ಬಹಳ ಹೊತ್ತು ಮಾತಿನ ಜಟಾಪಟಿಯೇ ನಡೆದುಹೋಯಿತು. ಆರೋಪ ಪ್ರತ್ಯಾರೋಪಗಳು ಮಿತಿ ಮೀರಿ ತೀರಾ ವೈಯುಕ್ತಿಕ ಟೀಕೆಯ ಮಟ್ಟಕ್ಕೆ ಇಳಿದು ನಿಯಂತ್ರಣ ತಪ್ಪುತ್ತದೆ ಎಂದಾಗ ಐವನ್ ಡಿಸೋಜ ಮತ್ತು ಇತರ ನಾಯಕರು ಮಧ್ಯ ಪ್ರವೇಶಿಸಿ ಸಮಾಧಾನ ಪಡಿಸಿ ಸಭೆಯಿಂದ ತೆರಳಿದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನ ಎರಡು ಬಣಗಳ ಮಧ್ಯೆ ಕಳೆದ ಕೆಲವು ಸಮಯಗಳಿಂದ ಹೊಗೆಯಾಡುತ್ತಿದ್ದ ಭಿನ್ನಮತ ಒಮ್ಮೆಲೇ ಸ್ಪೋಟಗೊಂಡು ಹೊರ ಬಂತು. ನಾಯಕರ ಮಧ್ಯೆ ಇದ್ದ ಅಸಮಾಧಾನ, ಆಕ್ರೋಶ, ಅಸಹಿಷ್ಣುತೆಗಳು ತೆರೆಮರೆಯಿಂದ ಹೊರ ಬಂದು ಸ್ಪೋಟಗೊಂಡಿತು.

ಸತತ ಚುನಾವಣಾ ಸೋಲು, ಅಧ್ಯಕ್ಷರ ರಾಜಿನಾಮೆಯಿಂದ ಕಂಗೆಟ್ಟಿದ್ದ ಸುಳ್ಯ ಕಾಂಗ್ರೆಸ್ ಗೆ ಇದೀಗ ಉಂಟಾದ ಭಿನ್ನಮತ ಸ್ಪೋಟ ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago