Advertisement
ಸುದ್ದಿಗಳು

‘ಕಾಂಗ್ರೆಸ್ ಸಭೆ ಅಂಗಡಿಯಲ್ಲಿ ನಡೆಯುತ್ತಿದೆ’- ಎಂಬ ಹೇಳಿಕೆ ಭಿನ್ನಮತ ಸ್ಫೋಟಕ್ಕೆ ಕಾರಣವಾಯಿತು…!

Share

ಸುಳ್ಯ: ‘ಸುಳ್ಯದ ಕಾಂಗ್ರೆಸ್ ಕಚೇರಿ ತೆರೆಯುತ್ತಿಲ್ಲ. ಪಕ್ಷದ ಸಭೆಗಳು ಅಂಗಡಿಯಲ್ಲಿ ನಡೆಯುತ್ತಿದೆ’ ಎಂಬ ಕಾಂಗ್ರೆಸ್ ನಾಯಕರೋರ್ವರ ಟೀಕೆ ರಾಜ್ಯ ನಾಯಕರ ಎದುರಿನಲ್ಲೇ ಕಾಂಗ್ರೆಸ್ ಎರಡು ಬಣಗಳ ನಡುವೆ ಭಿನ್ನಮತ ಒಮ್ಮಿಂದೊಮ್ಮೆಲೆ ಸ್ಪೋಟಗೊಳ್ಳಲು ಕಾರಣವಾಯಿತು‌…!

ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಉಪಸ್ಥಿತಿಯಲ್ಲಿ ಮಂಗಳವಾರ ಸಂಜೆ ಖಾಸಗೀ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಿನ್ನಮತ ಸ್ಪೋಟಗೊಂಡು ಸಭೆ ಅರ್ಧಕ್ಕೆ ಮೊಟಕುಗೊಂಡಿತು.

ಬೂಡು ವಾರ್ಡ್ ನಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯವಾಗಿ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದ ರಿಯಾಝ್ ಕಟ್ಟೆಕ್ಕಾರ್ ಸಭೆಗೆ ಆಗಮಿಸಿದಾಗ ಒಂದು ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಇದನ್ನು ಪ್ರಶ್ನಿಸಿದ್ದರು. ಬಳಿಕ ರಿಯಾಝ್ ಅವರನ್ನು ಸಭೆಯಿಂದ ಹೊರಹೋಗುವಂತೆ ನಾಯಕರು ಸೂಚಿಸಿದ್ದರು. ಹೊರ ಕಳಿಸಿದರ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಇದು ಒಮ್ಮೆಗೆ ಶಾಂತವಾದರೂ ‘ಕಾಂಗ್ರೆಸ್ ಸಭೆ ಅಂಗಡಿಯಲ್ಲಿ ನಡೆಯುತಿದೆ’ ಎಂಬ ನಾಯಕರ ಹೇಳಿಕೆ ಸಭೆಯಲ್ಲಿ ಮತ್ತೆ ಭಾರೀ ಗದ್ದಲಕ್ಕೆ, ವಾಗ್ವಾದಕ್ಕೆ ಕಾರಣವಾಯಿತು. ಬಂಡಾಯ ಪಕ್ಷೇತರ ಅಭ್ಯರ್ಥಿಯನ್ನು ಪಕ್ಷದವರೇ ಆದ ಕೆಲವು ನಾಯಕರು ಬೆಂಬಲಿಸಿದ್ದಾರೆ. ಇದು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯ ಸೋಲಿಗೆ ಕಾರಣವಯಿತು. ಇಂತಹಾ ನಾಯಕರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಇನ್ನೊಂದು ಬಣ ತಿರುಗೇಟು ನೀಡಿದಾಗ ಸಭೆಯಲ್ಲಿ ನಾಯಕರ ಮಾತಿನ ಸಮರ ಆರಂಭಗೊಂಡಿತು. ಬಳಿಕ ಬಹಳ ಹೊತ್ತು ಮಾತಿನ ಜಟಾಪಟಿಯೇ ನಡೆದುಹೋಯಿತು. ಆರೋಪ ಪ್ರತ್ಯಾರೋಪಗಳು ಮಿತಿ ಮೀರಿ ತೀರಾ ವೈಯುಕ್ತಿಕ ಟೀಕೆಯ ಮಟ್ಟಕ್ಕೆ ಇಳಿದು ನಿಯಂತ್ರಣ ತಪ್ಪುತ್ತದೆ ಎಂದಾಗ ಐವನ್ ಡಿಸೋಜ ಮತ್ತು ಇತರ ನಾಯಕರು ಮಧ್ಯ ಪ್ರವೇಶಿಸಿ ಸಮಾಧಾನ ಪಡಿಸಿ ಸಭೆಯಿಂದ ತೆರಳಿದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನ ಎರಡು ಬಣಗಳ ಮಧ್ಯೆ ಕಳೆದ ಕೆಲವು ಸಮಯಗಳಿಂದ ಹೊಗೆಯಾಡುತ್ತಿದ್ದ ಭಿನ್ನಮತ ಒಮ್ಮೆಲೇ ಸ್ಪೋಟಗೊಂಡು ಹೊರ ಬಂತು. ನಾಯಕರ ಮಧ್ಯೆ ಇದ್ದ ಅಸಮಾಧಾನ, ಆಕ್ರೋಶ, ಅಸಹಿಷ್ಣುತೆಗಳು ತೆರೆಮರೆಯಿಂದ ಹೊರ ಬಂದು ಸ್ಪೋಟಗೊಂಡಿತು.

ಸತತ ಚುನಾವಣಾ ಸೋಲು, ಅಧ್ಯಕ್ಷರ ರಾಜಿನಾಮೆಯಿಂದ ಕಂಗೆಟ್ಟಿದ್ದ ಸುಳ್ಯ ಕಾಂಗ್ರೆಸ್ ಗೆ ಇದೀಗ ಉಂಟಾದ ಭಿನ್ನಮತ ಸ್ಪೋಟ ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

4 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

4 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago