ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…