ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…