ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…