ಕಾಂತಮಂಗಲ ಬಾವಿ ದುರಸ್ತಿಗೆ ಮನವಿ

June 17, 2019
7:00 PM

ಸುಳ್ಯ: ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯಗುಂಡಿ,ಕೊಳಚೆ ನೀರಿನ ಇಂಗುಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು ,ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೆ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ  ಸುಳ್ಯ ತಾಹಶೀಲ್ದಾರರಿಗೆ ಮನವಿ ನೀಡಲಾಯಿತು.

Advertisement

ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ,ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ,ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ,ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನೀಲ್ ,ದಯಾನಂದ,ಶಶಿಧರ, ವಸಂತ ಬಸವನಪಾದೆ,ಸುನೀಲ್ ,ದೀಕ್ಷೀತ್,ಉಮೇಶ್,ರಾಜೇಶ್,ಕುಮಾರ ಗಂಧದಗುಡ್ಡೆ ಮೆದಲಾದವರು ಹಾಜರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group