ಸುಳ್ಯ: ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯಗುಂಡಿ,ಕೊಳಚೆ ನೀರಿನ ಇಂಗುಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು ,ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೆ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸುಳ್ಯ ತಾಹಶೀಲ್ದಾರರಿಗೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ,ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ,ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ,ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನೀಲ್ ,ದಯಾನಂದ,ಶಶಿಧರ, ವಸಂತ ಬಸವನಪಾದೆ,ಸುನೀಲ್ ,ದೀಕ್ಷೀತ್,ಉಮೇಶ್,ರಾಜೇಶ್,ಕುಮಾರ ಗಂಧದಗುಡ್ಡೆ ಮೆದಲಾದವರು ಹಾಜರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…