ಸುಳ್ಯ: ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯಗುಂಡಿ,ಕೊಳಚೆ ನೀರಿನ ಇಂಗುಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು ,ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೆ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸುಳ್ಯ ತಾಹಶೀಲ್ದಾರರಿಗೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ,ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ,ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ,ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನೀಲ್ ,ದಯಾನಂದ,ಶಶಿಧರ, ವಸಂತ ಬಸವನಪಾದೆ,ಸುನೀಲ್ ,ದೀಕ್ಷೀತ್,ಉಮೇಶ್,ರಾಜೇಶ್,ಕುಮಾರ ಗಂಧದಗುಡ್ಡೆ ಮೆದಲಾದವರು ಹಾಜರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…