ಸುಳ್ಯ: ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯಗುಂಡಿ,ಕೊಳಚೆ ನೀರಿನ ಇಂಗುಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು ,ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೆ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸುಳ್ಯ ತಾಹಶೀಲ್ದಾರರಿಗೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ,ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ,ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ,ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನೀಲ್ ,ದಯಾನಂದ,ಶಶಿಧರ, ವಸಂತ ಬಸವನಪಾದೆ,ಸುನೀಲ್ ,ದೀಕ್ಷೀತ್,ಉಮೇಶ್,ರಾಜೇಶ್,ಕುಮಾರ ಗಂಧದಗುಡ್ಡೆ ಮೆದಲಾದವರು ಹಾಜರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…