ರಾಜ್ಯ

ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಿಸಲು ಎಲ್ಲಾ ಪ್ರಯತ್ನ- ರಾಜ್‍ಮೋಹನ್ ಉಣ್ಣಿತ್ತಾನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.

Advertisement
Advertisement

ಕಾಞಂಗಾಡ್ ನಗರ ಅಭಿವೃದ್ಧಿ  ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್‍ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

4 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

5 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

11 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

16 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

17 hours ago