ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.
ಕಾಞಂಗಾಡ್ ನಗರ ಅಭಿವೃದ್ಧಿ ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…