ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.
ಕಾಞಂಗಾಡ್ ನಗರ ಅಭಿವೃದ್ಧಿ ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…