Advertisement
ಸಾಹಿತ್ಯ

“ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ : ಪ್ರಕೃತಿಯನ್ನು ಉಳಿಸಲು ಖ್ಯಾತ ರಂಗಕರ್ಮಿ ಪ್ರಸನ್ನ ಕರೆ

Share

ಮಡಿಕೇರಿ  : ಕಳೆದು ಹೋದ ಪ್ರಕೃತಿಯನ್ನು ಉಳಿಸಿಕೊಳ್ಳಲಾಗದೆ ಮತ್ತೊಬ್ಬರ ನಂಬಿಕೆಯನ್ನು ಪ್ರಶ್ನಿಸಿ ಮಾನಸಿಕ ಹಿಂಸೆ ನೀಡುವ ಪ್ರಯತ್ನಗಳು ಹೆಚ್ಚಾಗುತ್ತಿದೆ ಎಂದು ಶಿವಮೊಗ್ಗ ಕವಿಕಾವ್ಯ ಟ್ರಸ್ಟ್ ನ   ರಂಗಕರ್ಮಿ ಪ್ರಸನ್ನ ವಿಷಾದ ವ್ಯಕ್ತಪಡಿಸಿದ್ದಾರೆ.

ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜ್‍ನ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬಿ.ಆರ್.ಜೋಯಪ್ಪ ಅವರು ಬರೆದ “ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ ಕಾರ್ಯಕ್ರಮ ನಡೆಯಿತು.
ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಪ್ರಸನ್ನ ಅವರು, ಹಿಂದೆ ಪರಿಸರವನ್ನು ಉಳಿಸಿ ಬೆಳೆಸುವ ಸಂಸ್ಕೃತಿಯನ್ನು ಅನುಸರಿಸಲಾಗುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಬೆಟ್ಟ, ಗುಡ್ಡಗಳನ್ನು ನಾಶ ಮಾಡಿ, ಕಟ್ಟಡ ಕಾಮಗಾರಿಗಳಿಂದ ಪ್ರಕೃತಿಯ ಸೊಬಗನ್ನು ನಿರಂತರವಾಗಿ ನಾಶ ಮಾಡಲಾಗುತ್ತಿದೆ. ಬಾಲ್ಯವೆಂಬುದು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಮಹತ್ತರ ಘಟ್ಟವಾಗಿದೆ. ಆದರೆ ಆಧುನಿಕತೆಯ ಆಡಂಬರದಿಂದಾಗಿ ಮಕ್ಕಳ ಬದುಕು ಸಂಕುಚಿತಗೊಳ್ಳುತ್ತಿದೆ. ಹೆಣ್ಣು ಮಕ್ಕಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆಚಾರ ವಿಚಾರವನ್ನು ಗೌರವಿಸುತ್ತಿದ್ದರು. ಆದರೆ ಇಂದು ಪದ್ದತಿ, ಪರಂಪರೆಗಳು ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪರಿಸರದ ಅಳಿವು-ಉಳಿವು ಸ್ತ್ರೀಶಕ್ತಿ ಕೈಯಲಿದೆ ಎಂದರು. ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾತ್ತಿದ್ದು, ತಾಂತ್ರಿಕತೆಯೊಂದಿಗೆ ಓದಿನ ಮೇಲೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಪ್ರಸನ್ನ ಕಿವಿಮಾತು ಹೇಳಿದರು.

ಹೆಸರಾಂತ ಕತೆಗಾರ ಹಾಗೂ ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಅಬ್ದುಲ್ ರಶೀದ್ ಮಾತನಾಡಿ, ಹಿಂದಿನ ಕಾಲದಲ್ಲಿ ಒಂದು ಪುಸ್ತಕವನ್ನು ಪ್ರಕಟ ಮಾಡಬೇಕಾದರೆ ಅದರಲ್ಲಿ ಅನೇಕರ ಪರಿಶ್ರಮ ಅಡಕವಾಗಿರುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ನೂತನ ತಂತ್ರಜ್ಞಾನದಿಂದಾಗಿ ಲೇಖನ ಪ್ರಕಟ, ಪುಸ್ತಕ ಮುದ್ರಣ ಮತ್ತು ಓದುವುದು ಸುಲಭವಾಗಿದೆ ಎಂದರು.

“ಬೆಟ್ಟದ ಕತೆಗಳು” ಕೃತಿಕಾರ ಬಿ.ಆರ್.ಜೋಯಪ್ಪ ಮಾತನಾಡಿ ಕೃತಿ ರಚನೆಯ ಅನುಭವಗಳನ್ನು ಹಂಚಿಕೊಂಡರು. ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಯಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್‍ನ ಪ್ರಾಂಶುಪಾಲ ಪಿ.ಆರ್.ವಿಜಯ, ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫರ್ಡ್ ಕ್ರಾಸ್ತಾ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

8 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

8 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

9 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

17 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago