Advertisement
ಸಾಹಿತ್ಯ

“ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ : ಪ್ರಕೃತಿಯನ್ನು ಉಳಿಸಲು ಖ್ಯಾತ ರಂಗಕರ್ಮಿ ಪ್ರಸನ್ನ ಕರೆ

Share

ಮಡಿಕೇರಿ  : ಕಳೆದು ಹೋದ ಪ್ರಕೃತಿಯನ್ನು ಉಳಿಸಿಕೊಳ್ಳಲಾಗದೆ ಮತ್ತೊಬ್ಬರ ನಂಬಿಕೆಯನ್ನು ಪ್ರಶ್ನಿಸಿ ಮಾನಸಿಕ ಹಿಂಸೆ ನೀಡುವ ಪ್ರಯತ್ನಗಳು ಹೆಚ್ಚಾಗುತ್ತಿದೆ ಎಂದು ಶಿವಮೊಗ್ಗ ಕವಿಕಾವ್ಯ ಟ್ರಸ್ಟ್ ನ   ರಂಗಕರ್ಮಿ ಪ್ರಸನ್ನ ವಿಷಾದ ವ್ಯಕ್ತಪಡಿಸಿದ್ದಾರೆ.

ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜ್‍ನ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬಿ.ಆರ್.ಜೋಯಪ್ಪ ಅವರು ಬರೆದ “ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ ಕಾರ್ಯಕ್ರಮ ನಡೆಯಿತು.
ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಪ್ರಸನ್ನ ಅವರು, ಹಿಂದೆ ಪರಿಸರವನ್ನು ಉಳಿಸಿ ಬೆಳೆಸುವ ಸಂಸ್ಕೃತಿಯನ್ನು ಅನುಸರಿಸಲಾಗುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಬೆಟ್ಟ, ಗುಡ್ಡಗಳನ್ನು ನಾಶ ಮಾಡಿ, ಕಟ್ಟಡ ಕಾಮಗಾರಿಗಳಿಂದ ಪ್ರಕೃತಿಯ ಸೊಬಗನ್ನು ನಿರಂತರವಾಗಿ ನಾಶ ಮಾಡಲಾಗುತ್ತಿದೆ. ಬಾಲ್ಯವೆಂಬುದು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಮಹತ್ತರ ಘಟ್ಟವಾಗಿದೆ. ಆದರೆ ಆಧುನಿಕತೆಯ ಆಡಂಬರದಿಂದಾಗಿ ಮಕ್ಕಳ ಬದುಕು ಸಂಕುಚಿತಗೊಳ್ಳುತ್ತಿದೆ. ಹೆಣ್ಣು ಮಕ್ಕಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆಚಾರ ವಿಚಾರವನ್ನು ಗೌರವಿಸುತ್ತಿದ್ದರು. ಆದರೆ ಇಂದು ಪದ್ದತಿ, ಪರಂಪರೆಗಳು ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪರಿಸರದ ಅಳಿವು-ಉಳಿವು ಸ್ತ್ರೀಶಕ್ತಿ ಕೈಯಲಿದೆ ಎಂದರು. ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾತ್ತಿದ್ದು, ತಾಂತ್ರಿಕತೆಯೊಂದಿಗೆ ಓದಿನ ಮೇಲೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಪ್ರಸನ್ನ ಕಿವಿಮಾತು ಹೇಳಿದರು.

ಹೆಸರಾಂತ ಕತೆಗಾರ ಹಾಗೂ ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಅಬ್ದುಲ್ ರಶೀದ್ ಮಾತನಾಡಿ, ಹಿಂದಿನ ಕಾಲದಲ್ಲಿ ಒಂದು ಪುಸ್ತಕವನ್ನು ಪ್ರಕಟ ಮಾಡಬೇಕಾದರೆ ಅದರಲ್ಲಿ ಅನೇಕರ ಪರಿಶ್ರಮ ಅಡಕವಾಗಿರುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ನೂತನ ತಂತ್ರಜ್ಞಾನದಿಂದಾಗಿ ಲೇಖನ ಪ್ರಕಟ, ಪುಸ್ತಕ ಮುದ್ರಣ ಮತ್ತು ಓದುವುದು ಸುಲಭವಾಗಿದೆ ಎಂದರು.

“ಬೆಟ್ಟದ ಕತೆಗಳು” ಕೃತಿಕಾರ ಬಿ.ಆರ್.ಜೋಯಪ್ಪ ಮಾತನಾಡಿ ಕೃತಿ ರಚನೆಯ ಅನುಭವಗಳನ್ನು ಹಂಚಿಕೊಂಡರು. ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಯಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್‍ನ ಪ್ರಾಂಶುಪಾಲ ಪಿ.ಆರ್.ವಿಜಯ, ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫರ್ಡ್ ಕ್ರಾಸ್ತಾ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 hour ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

17 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago