Advertisement
ಧಾರ್ಮಿಕ

ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

Share

ಪುತ್ತೂರು: ಭಜನೆಯು ದೇವರನ್ನು ಕಾಣುವ ಪ್ರಯತ್ನವಾಗಿದ್ದು, ಭಜನಾ ಟ್ರಸ್ಟ್ ನಿರ್ಮಾಣದ ಮೂಲಕ ಸಂಘಟನಾತ್ಮಕವಾಗಿ ಭಗವಂತನನ್ನು ಕಾಣುವ ಪ್ರಯತ್ನವಾಗಿದೆ. ಭಜನೆಯು ಪ್ರೇರಣೆ ಸಂಘಟಿತವಾಗಿ ಬೆಳೆದಂತೆ ಸಮಾಜದಲಿ ಋಣಾತ್ಮಕ ಆಂಶಗಳು ದೂರವಾಗಲಿದೆ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣ ಹೇಳಿದರು.
ಅವರು  ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಳದ ನಟರಾಜವೇದಿಕೆಯಲ್ಲಿ ನಡೆದ ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.
ಅತಿಥಿಯಾಗಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ನಮ್ಮ ಸಂಸ್ಕøತಿಯ ಭಾಗವಾಗಿದ್ದು, ಇದೀಗ ಅಳಿವಿನಂಚಿನಲ್ಲಿರುವ ಭಜನೆ, ಸಂಕೀರ್ತನೆಗಳನ್ನು ಮತ್ತೊಮ್ಮೆ ಬೆಳೆಸುವ ಪ್ರಯತ್ನ ಟ್ರಸ್ಟ್‍ನಿಂದ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆ ಹಾಡುವುದರಿಂದ ಮಕ್ಕಳಲ್ಲಿ ಸಾಹಿತ್ಯದ ಜೊತೆಗೆ ಜ್ಞಾನ ಮತ್ತು ಸಂಸ್ಕಾರದ ಬೆಳವಣಿಗೆಯಾಗುತ್ತದೆ ಎಂದರು.
ಹನುಮಗಿರಿ ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಿದ್ದರು.  ದ.ಕ.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಾರಂಪಾಡಿ ಉಮಾಮಹೇಶ್ವರ ದೇವಸ್ಥಾನದ ಉಪಾಧ್ಯಕ್ಷ ಮಧುಕರ ರೈ, ಮುಂಬಯಿಯ ಉದ್ಯಮಿ ಕುಕ್ಕುಂದೂರು ಚಂದ್ರಶೇಖರ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಜನಾಮೃತ ಭಾಗ-1, ಭಾಗ 2 ಮತ್ತು ವಿಜಯದಾಸರ ಪಂಚರತ್ನ ಸುಳಾದಿ ಎಂಬ ಭಜನ ಸಾಹಿತ್ಯ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಟ್ರಸ್ಟ್‍ನ ಅಧ್ಯಕ್ಷ ರಾಮಕೃಷ್ಣ ಕಾಟುಕುಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್‍ನ ಉಪಾಧ್ಯಕ್ಷ ಜಯರಾಮ ನೆಲ್ಲಿತ್ತಾಯ ಸ್ವಾಗತಿಸಿದರು. ಪತ್ರಕರ್ತ ಎಂ.ನಾ. ಚಂಬಲ್ತಿಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಕಿಶೋರ್ ಪೆರ್ಲ ಮತ್ತು ಸಂಗಡಿಗರಿಂದ ದಾಸಭಕ್ತಿ ಭಜನಾಮೃತ ಹಾಗೂ ಭಜನಾರ್ಥಿಗಳಿಂದ ಸಮೂಹ ಗಾಯನ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

27 minutes ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 hour ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

8 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

8 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

19 hours ago