Advertisement
The Rural Mirror ಕಾಳಜಿ

ಕಾಡಿಗೆ “ಡಾಮರು” ಸುರಿತಾರಾ…..! ವ್ಯವಸ್ಥೆ ನೋಡಿದರೆ ನಿಮಗೇ ಅಚ್ಚರಿಯಾಗುತ್ತದೆ…….!

Share

ಸುಳ್ಯ: ರಸ್ತೆಗೆ  ಡಾಮರು ಹಾಕುವುದು , ಕಾಡಿಗೆ ಡಾಮರು ಸುರಿಯುವುದು…!.

ಇದೊಂದು ಅಚ್ಚರಿ ಹಾಗೂ ಪ್ರಶ್ನಾರ್ಹ ಸಂಗತಿ. ಆದರೆ ಈ ಬಗ್ಗೆ ಮಾತನಾಡುವವರು, ಪ್ರಶ್ನೆ ಮಾಡುವವರು ಯಾರು ?. ಅಧಿಕಾರಿಗಳು ನೋಡ್ತಾರಾ , ಇಲಾಖೆಗಳು ಬರ್ತಾವಾ ? ಜನಪ್ರತಿನಿಧಿಗಳು ಕೇಳ್ತಾರಾ ? ಜನರು ಮಾತಾಡ್ತಾರಾ ?

ಹೌದು, ಸುಮಾರು ಒಂದು ಪಿಕ್ ಅಪ್ ನಲ್ಲಿ ಹಿಡಿಯಬಹುದಾದಷ್ಟು ಜಲ್ಲಿ ಮಿಶ್ರಣ ಮಾಡಿರುವ ಡಾಮರು ಕಾಡಿನಲ್ಲಿ ಸುರಿಯಲಾಗಿದೆ. ಜನ   ಓಡಾಟ ವಿರಳ ಇರುವ ಪ್ರದೇಶದವಲ್ಲಿ ಈ ಡಾಮರು ಸುರಿಯಲಾಗಿದೆ. ಹಾಗಿದ್ದರೆ ಎಲ್ಲಿ  ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

 

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ದೈವಸ್ಥಾನದ ಬಳಿಯ ಮೊಗ್ರ ಭಜನಾ ಮಂದಿರದಿಂದ ಕೊಂಚ ದೂರದಲ್ಲಿ  ರಬ್ಬರ್ ತೋಟವೊಂದರ ಬಳಿಯ ಕಿರಾಲ್ ಬೋಗಿ ಮರದ ಪಕ್ಕ ಮಿಕ್ಸ್ ಮಾಡಿರುವ ಡಾಮರು  ಸುರಿಯಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆಗೆ ಡಾಮರು ಹಾಕಲಾಗಿತ್ತು. ಇದಕ್ಕೆ ಈ ಬಾರಿ ಅಲ್ಲಲ್ಲಿ ತೇಪೆ ಮಾಡುತ್ತಾ ಬರಲಾಗಿತ್ತು. ಕೊನೆಗೆ ಉಳಿದ ಡಾಮರು ಇಲ್ಲಿ  ಸುರಿಯಲಾಗಿದೆಯೇ ಎಂಬ ಸಂದೇಹ ಇಲ್ಲಿ ಮೂಡಿದೆ.

 

ಇಲ್ಲಿರುವ ಪ್ರಶ್ನೆ ಇದಲ್ಲ. ಇದು ಗುತ್ತಿಗೆದಾರ ಹಣವೇ ಆಗಿರಬಹುದು, ಆದರೆ ಅದು ಸರಕಾರದಿಂದ ಮಂಜೂರಾಗುವ ಹಣ. ಜನರ ತೆರಿಗೆಯ ಹಣ. ಅದನ್ನು ಹೀಗೆ ಎಸೆದು ಹೋಗುವದು ಎಷ್ಟು ಸರಿ. ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿದೆ. ಅಲ್ಲಲ್ಲಿ  ಹೊಂಡಗಳು ಇವೆ.  ಒಂದು ಸೇತುವೆಗೆ ಹಲವು ವರ್ಷಗಳಿಂದ ಬೇಡಿಕೆ ಇದೆ.  ಇದೇ ರಸ್ತೆಯಲ್ಲಿ ಈಗಲೂ ಕೆಲವು ಕಡೆ ಹೊಂಡಗಳು ಇವೆ. ಕನಿಷ್ಠ ಇಲ್ಲಿಗಾದರೂ ಈ ಡಾಮರು ಹಾಕಬಹುದಾಗಿತ್ತು ಎಂಬುದು ಜನರ ಒತ್ತಾಯ. ಅದೂ ಅಲ್ಲದೆ ಇದೇ ರಸ್ತೆಯನ್ನು  ಕಾಂಕ್ರೀಟ್ ರಸ್ತೆ ಮೂಲಕ ಅಭಿವೃದ್ಧಿ ಮಾಡಲಾಗಿದೆ. ಅದರ ಆರಂಭಕ್ಕೆ ಡಾಮರು ಹಾಕಬಹುದಾಗಿತ್ತು. ಅವಕಾಶಗಳು ಸಾಕಷ್ಟು ಇತ್ತು. ಅದಿಲ್ಲದೆ ಹೀಗೆ ರಸ್ತೆ ಬದಿಯ ಕಾಡಿಗೆ ಎಸೆದು ಹೋಗುವುದು  ಎಷ್ಟು ಸರಿ ಎಂಬ ಪ್ರಶ್ನೆ ಈಗ ಜನರು ಕೇಳುತ್ತಾರೆ. ಯಾವ ಜನಪ್ರತಿನಿಧಿ ಈ ಬಗ್ಗೆ ಮಾತನಾಡುತ್ತಾರೆ ? ಯಾವ ಅಧಿಕಾರಿ ಇಂತಹವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ? ಯಾರು ಚೌಕೀದಾರ್ ಆಗುತ್ತಾರೆ ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago