Advertisement
The Rural Mirror ಕಾಳಜಿ

ಕಾಡಿಗೆ “ಡಾಮರು” ಸುರಿತಾರಾ…..! ವ್ಯವಸ್ಥೆ ನೋಡಿದರೆ ನಿಮಗೇ ಅಚ್ಚರಿಯಾಗುತ್ತದೆ…….!

Share

ಸುಳ್ಯ: ರಸ್ತೆಗೆ  ಡಾಮರು ಹಾಕುವುದು , ಕಾಡಿಗೆ ಡಾಮರು ಸುರಿಯುವುದು…!.

ಇದೊಂದು ಅಚ್ಚರಿ ಹಾಗೂ ಪ್ರಶ್ನಾರ್ಹ ಸಂಗತಿ. ಆದರೆ ಈ ಬಗ್ಗೆ ಮಾತನಾಡುವವರು, ಪ್ರಶ್ನೆ ಮಾಡುವವರು ಯಾರು ?. ಅಧಿಕಾರಿಗಳು ನೋಡ್ತಾರಾ , ಇಲಾಖೆಗಳು ಬರ್ತಾವಾ ? ಜನಪ್ರತಿನಿಧಿಗಳು ಕೇಳ್ತಾರಾ ? ಜನರು ಮಾತಾಡ್ತಾರಾ ?

ಹೌದು, ಸುಮಾರು ಒಂದು ಪಿಕ್ ಅಪ್ ನಲ್ಲಿ ಹಿಡಿಯಬಹುದಾದಷ್ಟು ಜಲ್ಲಿ ಮಿಶ್ರಣ ಮಾಡಿರುವ ಡಾಮರು ಕಾಡಿನಲ್ಲಿ ಸುರಿಯಲಾಗಿದೆ. ಜನ   ಓಡಾಟ ವಿರಳ ಇರುವ ಪ್ರದೇಶದವಲ್ಲಿ ಈ ಡಾಮರು ಸುರಿಯಲಾಗಿದೆ. ಹಾಗಿದ್ದರೆ ಎಲ್ಲಿ  ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

 

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ದೈವಸ್ಥಾನದ ಬಳಿಯ ಮೊಗ್ರ ಭಜನಾ ಮಂದಿರದಿಂದ ಕೊಂಚ ದೂರದಲ್ಲಿ  ರಬ್ಬರ್ ತೋಟವೊಂದರ ಬಳಿಯ ಕಿರಾಲ್ ಬೋಗಿ ಮರದ ಪಕ್ಕ ಮಿಕ್ಸ್ ಮಾಡಿರುವ ಡಾಮರು  ಸುರಿಯಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆಗೆ ಡಾಮರು ಹಾಕಲಾಗಿತ್ತು. ಇದಕ್ಕೆ ಈ ಬಾರಿ ಅಲ್ಲಲ್ಲಿ ತೇಪೆ ಮಾಡುತ್ತಾ ಬರಲಾಗಿತ್ತು. ಕೊನೆಗೆ ಉಳಿದ ಡಾಮರು ಇಲ್ಲಿ  ಸುರಿಯಲಾಗಿದೆಯೇ ಎಂಬ ಸಂದೇಹ ಇಲ್ಲಿ ಮೂಡಿದೆ.

 

ಇಲ್ಲಿರುವ ಪ್ರಶ್ನೆ ಇದಲ್ಲ. ಇದು ಗುತ್ತಿಗೆದಾರ ಹಣವೇ ಆಗಿರಬಹುದು, ಆದರೆ ಅದು ಸರಕಾರದಿಂದ ಮಂಜೂರಾಗುವ ಹಣ. ಜನರ ತೆರಿಗೆಯ ಹಣ. ಅದನ್ನು ಹೀಗೆ ಎಸೆದು ಹೋಗುವದು ಎಷ್ಟು ಸರಿ. ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿದೆ. ಅಲ್ಲಲ್ಲಿ  ಹೊಂಡಗಳು ಇವೆ.  ಒಂದು ಸೇತುವೆಗೆ ಹಲವು ವರ್ಷಗಳಿಂದ ಬೇಡಿಕೆ ಇದೆ.  ಇದೇ ರಸ್ತೆಯಲ್ಲಿ ಈಗಲೂ ಕೆಲವು ಕಡೆ ಹೊಂಡಗಳು ಇವೆ. ಕನಿಷ್ಠ ಇಲ್ಲಿಗಾದರೂ ಈ ಡಾಮರು ಹಾಕಬಹುದಾಗಿತ್ತು ಎಂಬುದು ಜನರ ಒತ್ತಾಯ. ಅದೂ ಅಲ್ಲದೆ ಇದೇ ರಸ್ತೆಯನ್ನು  ಕಾಂಕ್ರೀಟ್ ರಸ್ತೆ ಮೂಲಕ ಅಭಿವೃದ್ಧಿ ಮಾಡಲಾಗಿದೆ. ಅದರ ಆರಂಭಕ್ಕೆ ಡಾಮರು ಹಾಕಬಹುದಾಗಿತ್ತು. ಅವಕಾಶಗಳು ಸಾಕಷ್ಟು ಇತ್ತು. ಅದಿಲ್ಲದೆ ಹೀಗೆ ರಸ್ತೆ ಬದಿಯ ಕಾಡಿಗೆ ಎಸೆದು ಹೋಗುವುದು  ಎಷ್ಟು ಸರಿ ಎಂಬ ಪ್ರಶ್ನೆ ಈಗ ಜನರು ಕೇಳುತ್ತಾರೆ. ಯಾವ ಜನಪ್ರತಿನಿಧಿ ಈ ಬಗ್ಗೆ ಮಾತನಾಡುತ್ತಾರೆ ? ಯಾವ ಅಧಿಕಾರಿ ಇಂತಹವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ? ಯಾರು ಚೌಕೀದಾರ್ ಆಗುತ್ತಾರೆ ?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 hour ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago