Advertisement
The Rural Mirror ಕಾಳಜಿ

ಕಾಡಿಗೆ “ಡಾಮರು” ಸುರಿತಾರಾ…..! ವ್ಯವಸ್ಥೆ ನೋಡಿದರೆ ನಿಮಗೇ ಅಚ್ಚರಿಯಾಗುತ್ತದೆ…….!

Share

ಸುಳ್ಯ: ರಸ್ತೆಗೆ  ಡಾಮರು ಹಾಕುವುದು , ಕಾಡಿಗೆ ಡಾಮರು ಸುರಿಯುವುದು…!.

ಇದೊಂದು ಅಚ್ಚರಿ ಹಾಗೂ ಪ್ರಶ್ನಾರ್ಹ ಸಂಗತಿ. ಆದರೆ ಈ ಬಗ್ಗೆ ಮಾತನಾಡುವವರು, ಪ್ರಶ್ನೆ ಮಾಡುವವರು ಯಾರು ?. ಅಧಿಕಾರಿಗಳು ನೋಡ್ತಾರಾ , ಇಲಾಖೆಗಳು ಬರ್ತಾವಾ ? ಜನಪ್ರತಿನಿಧಿಗಳು ಕೇಳ್ತಾರಾ ? ಜನರು ಮಾತಾಡ್ತಾರಾ ?

ಹೌದು, ಸುಮಾರು ಒಂದು ಪಿಕ್ ಅಪ್ ನಲ್ಲಿ ಹಿಡಿಯಬಹುದಾದಷ್ಟು ಜಲ್ಲಿ ಮಿಶ್ರಣ ಮಾಡಿರುವ ಡಾಮರು ಕಾಡಿನಲ್ಲಿ ಸುರಿಯಲಾಗಿದೆ. ಜನ   ಓಡಾಟ ವಿರಳ ಇರುವ ಪ್ರದೇಶದವಲ್ಲಿ ಈ ಡಾಮರು ಸುರಿಯಲಾಗಿದೆ. ಹಾಗಿದ್ದರೆ ಎಲ್ಲಿ  ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

 

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ದೈವಸ್ಥಾನದ ಬಳಿಯ ಮೊಗ್ರ ಭಜನಾ ಮಂದಿರದಿಂದ ಕೊಂಚ ದೂರದಲ್ಲಿ  ರಬ್ಬರ್ ತೋಟವೊಂದರ ಬಳಿಯ ಕಿರಾಲ್ ಬೋಗಿ ಮರದ ಪಕ್ಕ ಮಿಕ್ಸ್ ಮಾಡಿರುವ ಡಾಮರು  ಸುರಿಯಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆಗೆ ಡಾಮರು ಹಾಕಲಾಗಿತ್ತು. ಇದಕ್ಕೆ ಈ ಬಾರಿ ಅಲ್ಲಲ್ಲಿ ತೇಪೆ ಮಾಡುತ್ತಾ ಬರಲಾಗಿತ್ತು. ಕೊನೆಗೆ ಉಳಿದ ಡಾಮರು ಇಲ್ಲಿ  ಸುರಿಯಲಾಗಿದೆಯೇ ಎಂಬ ಸಂದೇಹ ಇಲ್ಲಿ ಮೂಡಿದೆ.

 

ಇಲ್ಲಿರುವ ಪ್ರಶ್ನೆ ಇದಲ್ಲ. ಇದು ಗುತ್ತಿಗೆದಾರ ಹಣವೇ ಆಗಿರಬಹುದು, ಆದರೆ ಅದು ಸರಕಾರದಿಂದ ಮಂಜೂರಾಗುವ ಹಣ. ಜನರ ತೆರಿಗೆಯ ಹಣ. ಅದನ್ನು ಹೀಗೆ ಎಸೆದು ಹೋಗುವದು ಎಷ್ಟು ಸರಿ. ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿದೆ. ಅಲ್ಲಲ್ಲಿ  ಹೊಂಡಗಳು ಇವೆ.  ಒಂದು ಸೇತುವೆಗೆ ಹಲವು ವರ್ಷಗಳಿಂದ ಬೇಡಿಕೆ ಇದೆ.  ಇದೇ ರಸ್ತೆಯಲ್ಲಿ ಈಗಲೂ ಕೆಲವು ಕಡೆ ಹೊಂಡಗಳು ಇವೆ. ಕನಿಷ್ಠ ಇಲ್ಲಿಗಾದರೂ ಈ ಡಾಮರು ಹಾಕಬಹುದಾಗಿತ್ತು ಎಂಬುದು ಜನರ ಒತ್ತಾಯ. ಅದೂ ಅಲ್ಲದೆ ಇದೇ ರಸ್ತೆಯನ್ನು  ಕಾಂಕ್ರೀಟ್ ರಸ್ತೆ ಮೂಲಕ ಅಭಿವೃದ್ಧಿ ಮಾಡಲಾಗಿದೆ. ಅದರ ಆರಂಭಕ್ಕೆ ಡಾಮರು ಹಾಕಬಹುದಾಗಿತ್ತು. ಅವಕಾಶಗಳು ಸಾಕಷ್ಟು ಇತ್ತು. ಅದಿಲ್ಲದೆ ಹೀಗೆ ರಸ್ತೆ ಬದಿಯ ಕಾಡಿಗೆ ಎಸೆದು ಹೋಗುವುದು  ಎಷ್ಟು ಸರಿ ಎಂಬ ಪ್ರಶ್ನೆ ಈಗ ಜನರು ಕೇಳುತ್ತಾರೆ. ಯಾವ ಜನಪ್ರತಿನಿಧಿ ಈ ಬಗ್ಗೆ ಮಾತನಾಡುತ್ತಾರೆ ? ಯಾವ ಅಧಿಕಾರಿ ಇಂತಹವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ? ಯಾರು ಚೌಕೀದಾರ್ ಆಗುತ್ತಾರೆ ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

15 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

15 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

15 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago