ಕಾಣಿಯೂರು ಅಂಚೆ ಪಾಲಕ ಅಶ್ವತ್ ರವರಿಗೆ ಬೀಳ್ಕೊಡುಗೆ

August 15, 2019
11:00 AM

ಕಾಣಿಯೂರು:  ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ಅಂಚೆ ಕಚೇರಿಗೆ ವರ್ಗಾವಣೆಗೊಂಡಿರುವ ಅಶ್ವತ್. ಎ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವು ಕಾಣಿಯೂರು ಹಾಗೂ ಬ್ರಾಂಚ್ ಆಫೀಸಿನ ಸಹಕಾರದೊಂದಿಗೆ ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಕಡಬದಿಂದ ವರ್ಗಾವಣೆಗೊಂಡು ಕಾಣಿಯೂರು ಅಂಚೆ ಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಳ್ಯ ಬ್ರಾಂಚ್‌ನ ಪೋಸ್ಟ್ ಮಾಸ್ಟರ್ ಬಾಲಕೃಷ್ಣ ಗೌಡ ಎ ಇವರು ಅಶ್ವತ್‌ರವರಿಗೆ ಶಾಲು ಹೊದಿಸಿ ಫಲ ಪುಷ್ಪದೊಂದಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಶುಭಹಾರೈಸಿದರು.

Advertisement
Advertisement
Advertisement

ಇದೆ ವೇಳೆ  ಅಶ್ವತ್‌ರವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಬ್ರಾಂಚ್ ಆಫೀಸಿನ ಯಶೋಧ, ನಾರಾಯಣ ಗೌಡ, ಯೋಗಿಶ, ಜಯ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕಾರ ನೀಡಿದ ಅಂಚೆಪಾಲಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಅಂಚೆ ಪಾಲಕ ಅಣ್ಣುರವರು ಮಾತನಾಡಿ ಬ್ರಾಂಚ್ ಆಫೀಸಿನವರು ಎಲ್ಲರೂ ಮುಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು. ನಾವೆಲ್ಲರೂ ಯಾವುದೇ ತಾರತಮ್ಯವಿಲ್ಲದೆ ಒಗ್ಗಟ್ಟಿನಿಂದ ಕೆಲಸವನ್ನು ಮಾಡೋಣ ಎಂದು ಹೇಳಿ ವರ್ಗಾವಣೆಗೊಂಡ ಅಶ್ವತ್‌ರಿಗೆ ಶುಭ ಹಾರೈಸಿದರು.

Advertisement

ಕಾಣಿಯೂರಿನ ಪೋಸ್ಟ್ ಮ್ಯಾನ್ ಉಮೇಶ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕಾಣಿಯೂರು ವಂದಿಸಿದರು. ಈ ಸಂದರ್ಭದಲ್ಲಿ ಬ್ರಾಂಚ್ ಆಫೀಸಿನ ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ ಮುರುಳ್ಯ, ಯಶೋಧ, ರಮೇಶ್ ಬೊಬ್ಬೆಕೇರಿ, ನಾರಾಯಣ ಗೌಡ, ತಾರಿಕಾ ಚಾರ್ವಾಕ, ಯೋಗಿಶ್ ದೋಳ್ಪಾಡಿ ಹಾಗೂ ಕಾಣಿಯೂರು ಶಿವ ಸ್ಟುಡಿಯೋ ಮಾಲಕರಾದ ವಸಂತ ಕೋಡಂದೂರು, ಬೆಳಂದೂರು ಗ್ರಾ.ಪಂ ಸದಸ್ಯ ಜಯಂತ ಅಬೀರ, ಕರಿಯಪ್ಪ, ಮೋಹಿನಿ ಮತ್ತಿರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror