Advertisement
ಸುದ್ದಿಗಳು

ಕಾಣಿಯೂರು ಅಂಚೆ ಪಾಲಕ ಅಶ್ವತ್ ರವರಿಗೆ ಬೀಳ್ಕೊಡುಗೆ

Share

ಕಾಣಿಯೂರು:  ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ಅಂಚೆ ಕಚೇರಿಗೆ ವರ್ಗಾವಣೆಗೊಂಡಿರುವ ಅಶ್ವತ್. ಎ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವು ಕಾಣಿಯೂರು ಹಾಗೂ ಬ್ರಾಂಚ್ ಆಫೀಸಿನ ಸಹಕಾರದೊಂದಿಗೆ ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಕಡಬದಿಂದ ವರ್ಗಾವಣೆಗೊಂಡು ಕಾಣಿಯೂರು ಅಂಚೆ ಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಳ್ಯ ಬ್ರಾಂಚ್‌ನ ಪೋಸ್ಟ್ ಮಾಸ್ಟರ್ ಬಾಲಕೃಷ್ಣ ಗೌಡ ಎ ಇವರು ಅಶ್ವತ್‌ರವರಿಗೆ ಶಾಲು ಹೊದಿಸಿ ಫಲ ಪುಷ್ಪದೊಂದಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಶುಭಹಾರೈಸಿದರು.

ಇದೆ ವೇಳೆ  ಅಶ್ವತ್‌ರವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಬ್ರಾಂಚ್ ಆಫೀಸಿನ ಯಶೋಧ, ನಾರಾಯಣ ಗೌಡ, ಯೋಗಿಶ, ಜಯ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕಾರ ನೀಡಿದ ಅಂಚೆಪಾಲಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಅಂಚೆ ಪಾಲಕ ಅಣ್ಣುರವರು ಮಾತನಾಡಿ ಬ್ರಾಂಚ್ ಆಫೀಸಿನವರು ಎಲ್ಲರೂ ಮುಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು. ನಾವೆಲ್ಲರೂ ಯಾವುದೇ ತಾರತಮ್ಯವಿಲ್ಲದೆ ಒಗ್ಗಟ್ಟಿನಿಂದ ಕೆಲಸವನ್ನು ಮಾಡೋಣ ಎಂದು ಹೇಳಿ ವರ್ಗಾವಣೆಗೊಂಡ ಅಶ್ವತ್‌ರಿಗೆ ಶುಭ ಹಾರೈಸಿದರು.

ಕಾಣಿಯೂರಿನ ಪೋಸ್ಟ್ ಮ್ಯಾನ್ ಉಮೇಶ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕಾಣಿಯೂರು ವಂದಿಸಿದರು. ಈ ಸಂದರ್ಭದಲ್ಲಿ ಬ್ರಾಂಚ್ ಆಫೀಸಿನ ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ ಮುರುಳ್ಯ, ಯಶೋಧ, ರಮೇಶ್ ಬೊಬ್ಬೆಕೇರಿ, ನಾರಾಯಣ ಗೌಡ, ತಾರಿಕಾ ಚಾರ್ವಾಕ, ಯೋಗಿಶ್ ದೋಳ್ಪಾಡಿ ಹಾಗೂ ಕಾಣಿಯೂರು ಶಿವ ಸ್ಟುಡಿಯೋ ಮಾಲಕರಾದ ವಸಂತ ಕೋಡಂದೂರು, ಬೆಳಂದೂರು ಗ್ರಾ.ಪಂ ಸದಸ್ಯ ಜಯಂತ ಅಬೀರ, ಕರಿಯಪ್ಪ, ಮೋಹಿನಿ ಮತ್ತಿರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

5 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

11 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

21 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago