Advertisement
ಸುದ್ದಿಗಳು

ಕಾಣಿಯೂರು ಅಂಚೆ ಪಾಲಕ ಅಶ್ವತ್ ರವರಿಗೆ ಬೀಳ್ಕೊಡುಗೆ

Share

ಕಾಣಿಯೂರು:  ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ಅಂಚೆ ಕಚೇರಿಗೆ ವರ್ಗಾವಣೆಗೊಂಡಿರುವ ಅಶ್ವತ್. ಎ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವು ಕಾಣಿಯೂರು ಹಾಗೂ ಬ್ರಾಂಚ್ ಆಫೀಸಿನ ಸಹಕಾರದೊಂದಿಗೆ ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಕಡಬದಿಂದ ವರ್ಗಾವಣೆಗೊಂಡು ಕಾಣಿಯೂರು ಅಂಚೆ ಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಳ್ಯ ಬ್ರಾಂಚ್‌ನ ಪೋಸ್ಟ್ ಮಾಸ್ಟರ್ ಬಾಲಕೃಷ್ಣ ಗೌಡ ಎ ಇವರು ಅಶ್ವತ್‌ರವರಿಗೆ ಶಾಲು ಹೊದಿಸಿ ಫಲ ಪುಷ್ಪದೊಂದಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಶುಭಹಾರೈಸಿದರು.

Advertisement
Advertisement

ಇದೆ ವೇಳೆ  ಅಶ್ವತ್‌ರವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಬ್ರಾಂಚ್ ಆಫೀಸಿನ ಯಶೋಧ, ನಾರಾಯಣ ಗೌಡ, ಯೋಗಿಶ, ಜಯ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕಾರ ನೀಡಿದ ಅಂಚೆಪಾಲಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಅಂಚೆ ಪಾಲಕ ಅಣ್ಣುರವರು ಮಾತನಾಡಿ ಬ್ರಾಂಚ್ ಆಫೀಸಿನವರು ಎಲ್ಲರೂ ಮುಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು. ನಾವೆಲ್ಲರೂ ಯಾವುದೇ ತಾರತಮ್ಯವಿಲ್ಲದೆ ಒಗ್ಗಟ್ಟಿನಿಂದ ಕೆಲಸವನ್ನು ಮಾಡೋಣ ಎಂದು ಹೇಳಿ ವರ್ಗಾವಣೆಗೊಂಡ ಅಶ್ವತ್‌ರಿಗೆ ಶುಭ ಹಾರೈಸಿದರು.

Advertisement

ಕಾಣಿಯೂರಿನ ಪೋಸ್ಟ್ ಮ್ಯಾನ್ ಉಮೇಶ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕಾಣಿಯೂರು ವಂದಿಸಿದರು. ಈ ಸಂದರ್ಭದಲ್ಲಿ ಬ್ರಾಂಚ್ ಆಫೀಸಿನ ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ ಮುರುಳ್ಯ, ಯಶೋಧ, ರಮೇಶ್ ಬೊಬ್ಬೆಕೇರಿ, ನಾರಾಯಣ ಗೌಡ, ತಾರಿಕಾ ಚಾರ್ವಾಕ, ಯೋಗಿಶ್ ದೋಳ್ಪಾಡಿ ಹಾಗೂ ಕಾಣಿಯೂರು ಶಿವ ಸ್ಟುಡಿಯೋ ಮಾಲಕರಾದ ವಸಂತ ಕೋಡಂದೂರು, ಬೆಳಂದೂರು ಗ್ರಾ.ಪಂ ಸದಸ್ಯ ಜಯಂತ ಅಬೀರ, ಕರಿಯಪ್ಪ, ಮೋಹಿನಿ ಮತ್ತಿರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

17 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

19 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago