ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15) ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.
ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.
ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490