ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15) ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.
ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.
ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…