ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15) ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.
ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.
ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…