ಅಪರಾಧ

ಕಾಣಿಯೂರು: ಕಾಲೇಜಿನ ಪಕ್ಕದ ಇಂಗು ಗುಂಡಿಯಲ್ಲಿ ಶಾಲಾ ಬಾಲಕನ ಶವ ಪತ್ತೆ

Share

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15)  ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.

ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ.  ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…

5 hours ago

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |

ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ…

5 hours ago

ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ…

5 hours ago

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…

14 hours ago

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

16 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

19 hours ago