Advertisement
ಅಪರಾಧ

ಕಾಣಿಯೂರು: ಕಾಲೇಜಿನ ಪಕ್ಕದ ಇಂಗು ಗುಂಡಿಯಲ್ಲಿ ಶಾಲಾ ಬಾಲಕನ ಶವ ಪತ್ತೆ

Share

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15)  ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.

ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ.  ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

18 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

18 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

18 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

18 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

19 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago