ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15) ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.
ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.
ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…