Advertisement
ಅಪರಾಧ

ಕಾಣಿಯೂರು: ಕಾಲೇಜಿನ ಪಕ್ಕದ ಇಂಗು ಗುಂಡಿಯಲ್ಲಿ ಶಾಲಾ ಬಾಲಕನ ಶವ ಪತ್ತೆ

Share

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15)  ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.

ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ.  ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

11 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

11 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

12 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

22 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago