Advertisement
ಸುದ್ದಿಗಳು

ಕಾಣಿಯೂರು ಪ್ರಗತಿಯಲ್ಲಿ ತುಳುವೆರೆ ಆಚರಣೆಲು ಒಂಜಿ ನೆಂಪು

Share

ಕಾಣಿಯೂರು : ನಮ್ಮ ತುಳುನಾಡಿನಲ್ಲಿ ಆಚರಿಸುವ ಪ್ರತಿಯೊಂದು ಆಚರಣೆಗೂ ತನ್ನದೇ ಆದ ಮಹತ್ವವಿದೆ.ಈ ಮಹತ್ವನ್ನು ಎಲ್ಲರೂ ತಿಳಿದುಕೊಳ್ಳುವುದು ಅತ್ಯವಶ್ಯ.ಆಟಿ ತಿಂಗಳು ಎಂದರೆ ಅದು ಕಷ್ಟದ ತಿಂಗಳು.ಹಾಲೆ ಮರದ ಕಷಾಯ ಕುಡಿಯುವ ಹಿನ್ನೆಲೆಯಲ್ಲೂ ವೈಜ್ಞಾನಿಕ ಸತ್ಯ ಅಡಗಿದೆ.ತುಳುನಾಡೆಂದರೆ ಅದು ವೈಶಿಷ್ಟ್ಯತೆಗೆ ಇನ್ನೊಂದು ಹೆಸರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ  ಹೇಳಿದರು.

ಅವರು  ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ,ಕಾಣಿಯೂರು ಪಿಂಗಾರ ತುಳುಕೂಟ ಮತ್ತು ಸವಣೂರು ಯುವಕ ಮಂಡಲದ ವತಿಯಿಂದ ನಡೆದ ತುಳುವೆರೆ ಆಚರಣೆಲು ಒಂಜಿ ನೆಂಪು -ಕಜ್ಜ ಕೊಟ್ಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಗತಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು ಮಾತನಾಡಿ,ತುಳುನಾಡು ಹಾಗೂ ವೈಚಾರಿಕತೆ ಕುರಿತು ವಿವರಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಯಶವಂತ ರೈ ಮಾತನಾಡಿ,ತುಳು ಸಂಸ್ಕೃತಿಯ ಕುರಿತು ಮೊಗೆದಷ್ಟು ಹೆಚ್ಚೆಚ್ಚು ವಿಚಾರಗಳು ಕಾಣ ಸಿಗುತ್ತದೆ.ತುಳು ಆಚರಣೆಗಳ ಕುರಿತು ಹಿರಿಯರು ಮಕ್ಕಳಿಗೆ ತಿಳಿ ಹೇಳುವ ಕಾರ್ಯ ಮಾಡಬೇಕು.ನಮ್ಮ ಪರಂಪರೆಗೆ ಅಗಾಧ ಶಕ್ತಿ ಇದೆ.ಎಲ್ಲಕ್ಕೂ ವೈಜ್ಞಾನಿಕ ಹಿನ್ನೆಲೆ ಇದೆ ಎಂದರು.

ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೊಡಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್,ತಾ.ಪಂ.ಉಪಾಧ್ಯಕ್ಷೆ ಲಲಿತಾ ಈಶ್ವರ,ನಾಟಿ ವೈದ್ಯ ಜಿನ್ನಪ್ಪ ಗೌಡ ಕಳುವಾಜೆ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ಟ್ರಸ್ಟಿ ಲಕ್ಷ್ಮೀ ಕರಿಯಪ್ಪ ರೈ ಮಾದೋಡಿ,ಸಂಸ್ಥೆಯ ಆಡಳಿತ ಸಮಿತಿ ಸದಸ್ಯರಾದ ನಾಗೇಶ್ ರೈ ಮಾಳ,ಚಂದ್ರಹಾಸ ರೈ ಅಗಲ್ಪಾಡಿ,ಎಂಜೀರು ಪದ್ಮನಾಭ ರೈ,ವೃಂದಾ ಜೆ.ರೈ,ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ರೈ ಪಾತಾಜೆ,ಉಪಾಧ್ಯಕ್ಷೆ ಸೌಮ್ಯ ಲಕ್ಷ್ಮೀ ಕಾನಾವು, ಪ್ರಗತಿ ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯಸ್ಥೆ ಗಿರಿಶಂಕರ ಸುಲಾಯ,ಕನ್ನಡ ಮಾಧ್ಯಮದ ಮುಖ್ಯಸ್ಥೆ ಸರಸ್ವತಿ ಎಂ,ಪಿಂಗಾರ ತುಳುಕೂಟದ ಅಧ್ಯಕ್ಷ ಜನಾರ್ದನ ಆಚಾರ್ಯ ಅಬೀರ,ಹಿರಿಯರಾದ ಅಣ್ಣು ಆಚಾರ್ಯ ಅಬೀರ ಉಪಸ್ಥಿತರಿದ್ದರು.

ಗೌರವಾರ್ಪಣೆ,ಅಭಿನಂದನೆ
ಕಾರ್ಯಕ್ರಮದಲ್ಲಿ 80 ನೇ ಹುಟ್ಟುಹಬ್ಬ ಆಚರಿಸಿದ ಪ್ರಗತಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿಯ ನಿರ್ದೆಶಕರಾಗಿ ಆಯ್ಕೆಯಾದ ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಉದಯ ರೈ ಮಾದೋಡಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಯಾಗಿ ನೇಮಕಗೊಂಡ ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸಂಧ್ಯಾ ಕುಮಾರಿ ಬಿ.ಎನ್ ಅವರಿಗೆ ಗೌರವಾರ್ಪಣೆ ಮಾಡಿ ಅಭಿನಂದಿಸಲಾಯಿತು.

ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಸ್ವಾಗತಿಸಿ,ಪ್ರಗತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು.ಶಿಕ್ಷಕರಾದ ಸುಬ್ರಹ್ಮಣ್ಯ ಸಿ.ಕೆ ಐವರ್ನಾಡು ,ವಿನಯ ವಿ.ಶೆಟ್ಟಿ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

15 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

15 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

15 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago