Advertisement
ಸುದ್ದಿಗಳು

ಕಾಣಿಯೂರು ಪ್ರಗತಿಯಲ್ಲಿ ತುಳುವೆರೆ ಆಚರಣೆಲು ಒಂಜಿ ನೆಂಪು

Share

ಕಾಣಿಯೂರು : ನಮ್ಮ ತುಳುನಾಡಿನಲ್ಲಿ ಆಚರಿಸುವ ಪ್ರತಿಯೊಂದು ಆಚರಣೆಗೂ ತನ್ನದೇ ಆದ ಮಹತ್ವವಿದೆ.ಈ ಮಹತ್ವನ್ನು ಎಲ್ಲರೂ ತಿಳಿದುಕೊಳ್ಳುವುದು ಅತ್ಯವಶ್ಯ.ಆಟಿ ತಿಂಗಳು ಎಂದರೆ ಅದು ಕಷ್ಟದ ತಿಂಗಳು.ಹಾಲೆ ಮರದ ಕಷಾಯ ಕುಡಿಯುವ ಹಿನ್ನೆಲೆಯಲ್ಲೂ ವೈಜ್ಞಾನಿಕ ಸತ್ಯ ಅಡಗಿದೆ.ತುಳುನಾಡೆಂದರೆ ಅದು ವೈಶಿಷ್ಟ್ಯತೆಗೆ ಇನ್ನೊಂದು ಹೆಸರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ  ಹೇಳಿದರು.

ಅವರು  ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ,ಕಾಣಿಯೂರು ಪಿಂಗಾರ ತುಳುಕೂಟ ಮತ್ತು ಸವಣೂರು ಯುವಕ ಮಂಡಲದ ವತಿಯಿಂದ ನಡೆದ ತುಳುವೆರೆ ಆಚರಣೆಲು ಒಂಜಿ ನೆಂಪು -ಕಜ್ಜ ಕೊಟ್ಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಗತಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು ಮಾತನಾಡಿ,ತುಳುನಾಡು ಹಾಗೂ ವೈಚಾರಿಕತೆ ಕುರಿತು ವಿವರಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಯಶವಂತ ರೈ ಮಾತನಾಡಿ,ತುಳು ಸಂಸ್ಕೃತಿಯ ಕುರಿತು ಮೊಗೆದಷ್ಟು ಹೆಚ್ಚೆಚ್ಚು ವಿಚಾರಗಳು ಕಾಣ ಸಿಗುತ್ತದೆ.ತುಳು ಆಚರಣೆಗಳ ಕುರಿತು ಹಿರಿಯರು ಮಕ್ಕಳಿಗೆ ತಿಳಿ ಹೇಳುವ ಕಾರ್ಯ ಮಾಡಬೇಕು.ನಮ್ಮ ಪರಂಪರೆಗೆ ಅಗಾಧ ಶಕ್ತಿ ಇದೆ.ಎಲ್ಲಕ್ಕೂ ವೈಜ್ಞಾನಿಕ ಹಿನ್ನೆಲೆ ಇದೆ ಎಂದರು.

ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೊಡಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್,ತಾ.ಪಂ.ಉಪಾಧ್ಯಕ್ಷೆ ಲಲಿತಾ ಈಶ್ವರ,ನಾಟಿ ವೈದ್ಯ ಜಿನ್ನಪ್ಪ ಗೌಡ ಕಳುವಾಜೆ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ಟ್ರಸ್ಟಿ ಲಕ್ಷ್ಮೀ ಕರಿಯಪ್ಪ ರೈ ಮಾದೋಡಿ,ಸಂಸ್ಥೆಯ ಆಡಳಿತ ಸಮಿತಿ ಸದಸ್ಯರಾದ ನಾಗೇಶ್ ರೈ ಮಾಳ,ಚಂದ್ರಹಾಸ ರೈ ಅಗಲ್ಪಾಡಿ,ಎಂಜೀರು ಪದ್ಮನಾಭ ರೈ,ವೃಂದಾ ಜೆ.ರೈ,ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ರೈ ಪಾತಾಜೆ,ಉಪಾಧ್ಯಕ್ಷೆ ಸೌಮ್ಯ ಲಕ್ಷ್ಮೀ ಕಾನಾವು, ಪ್ರಗತಿ ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯಸ್ಥೆ ಗಿರಿಶಂಕರ ಸುಲಾಯ,ಕನ್ನಡ ಮಾಧ್ಯಮದ ಮುಖ್ಯಸ್ಥೆ ಸರಸ್ವತಿ ಎಂ,ಪಿಂಗಾರ ತುಳುಕೂಟದ ಅಧ್ಯಕ್ಷ ಜನಾರ್ದನ ಆಚಾರ್ಯ ಅಬೀರ,ಹಿರಿಯರಾದ ಅಣ್ಣು ಆಚಾರ್ಯ ಅಬೀರ ಉಪಸ್ಥಿತರಿದ್ದರು.

ಗೌರವಾರ್ಪಣೆ,ಅಭಿನಂದನೆ
ಕಾರ್ಯಕ್ರಮದಲ್ಲಿ 80 ನೇ ಹುಟ್ಟುಹಬ್ಬ ಆಚರಿಸಿದ ಪ್ರಗತಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿಯ ನಿರ್ದೆಶಕರಾಗಿ ಆಯ್ಕೆಯಾದ ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಉದಯ ರೈ ಮಾದೋಡಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಯಾಗಿ ನೇಮಕಗೊಂಡ ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸಂಧ್ಯಾ ಕುಮಾರಿ ಬಿ.ಎನ್ ಅವರಿಗೆ ಗೌರವಾರ್ಪಣೆ ಮಾಡಿ ಅಭಿನಂದಿಸಲಾಯಿತು.

ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಸ್ವಾಗತಿಸಿ,ಪ್ರಗತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು.ಶಿಕ್ಷಕರಾದ ಸುಬ್ರಹ್ಮಣ್ಯ ಸಿ.ಕೆ ಐವರ್ನಾಡು ,ವಿನಯ ವಿ.ಶೆಟ್ಟಿ ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

13 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

18 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago