ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…