ಕಾಣಿಯೂರು:ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ದೇವರ ಮೇಲೆ ಭಕ್ತಿಯಿದ್ದಾಗ, ದೇವರ ಆದೇಶವನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಾಧ್ಯವಾಗುತ್ತದೆ . ಸತ್ಯನಾರಾಯಣ ದೇವರ ಆರಾಧನೆ ಮಾಡುವುದರಿಂದ ಸಕಲ ಫಲಗಳು ಪ್ರಾಪ್ತಿಯಾಗಿ ಬದುಕಿನ ಉನ್ನತ್ತಿಯಾಗುತ್ತದೆ. ಸಾಮೂಹಿಕ ಭಜನೆಯಿಂದ, ಭಕ್ತಿ ಭಾವದ ಆರಾಧನೆಯಿಂದ ಮನಶಾಂತಿ ಸಿಗುತ್ತದೆ ಎಂದರು.
ಅರ್ಚಕರಾದ ಸತ್ಯನಾರಾಯಣ ಕಾರಂತ ರಾಮಕುಂಜ, ಅನಂತರಾಮ ಉಪಾಧ್ಯಾಯ ತುಂಬ್ಯ, ದೀಪಕ್ ಕಲ್ಪಡ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.
ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಸ್ವಾಗತಿಸಿದರು. ಮಂಡಳಿಯ ಪದಾಧಿಕಾರಿಗಳು ಸ್ವಾಮೀಜಿಯವರಿಗೆ ಫಲವಸ್ತು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ ಹಾಗು ಸದಸ್ಯರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…