ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

August 27, 2019
10:51 PM

ಕಾಣಿಯೂರು:ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.2,  ಮತ್ತು 3 ರಂದು ನಡೆಯಲಿದೆ.

Advertisement
Advertisement

ಸೆ.02ನೇ ಸೋಮವಾರ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ,ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಾಂದಿಪನಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀಪ್ರಸಾದ್ ಧಾರ್ಮಿಕ ಭಾಷಣ ಮಾಡಲಿದ್ದು, ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ನಂತರ ರಾತ್ರಿ 12ರ ತನಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆ 03ರ ಮಂಗಳವಾರ ದಂದು ಬೆಳಿಗ್ಗೆ ಮಹಾಪೂಜೆ, ಗಣಹೋಮ ನಡೆದು ನಂತರ ವಿಷ್ಣು ಪ್ರಿಯ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ವಿಗ್ರಹ ವಿಸರ್ಜನಾ ಮೆರವಣಿಗೆ ಭಜನಾ ಮಂದಿರದಿಂದ ಹೊರಟು ಕೂಡುರಸ್ತೆಗಾಗಿ ಕಾಣಿಯೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಕಜೆ ಬಾಗಿಲು ಎಂಬಲ್ಲಿ ಜಲಸ್ತಂಭನ ಗೊಳ್ಳಲಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌
April 22, 2024
5:17 PM
by: The Rural Mirror ಸುದ್ದಿಜಾಲ
’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಮೇ 6 ರಂದು ಸಂಕಲ್ಪ ಆರಂಭ |
April 22, 2024
1:28 PM
by: ದ ರೂರಲ್ ಮಿರರ್.ಕಾಂ
500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |
April 17, 2024
2:45 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror